ಕಲ್ಲಡ್ಕ: ಕಳ್ಳತನದ ಆರೋಪ: ಯುವಕನ‌ ಮೇಲೆ ಹಲ್ಲೆ

0

ಮಂಗಳೂರು:ಯುವಕನೊಬ್ಬಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಆತನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ.

ಯುವಕನ ಮೇಲೆ ಹಲ್ಲೆ ನಡೆಸಿದ್ದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲಡ್ಕದ ಪಳನೀರು ಬಳಿ ಈ ಘಟನೆ ನಡೆದಿದ್ದು ಯುವಕನಿಗೆ ಹಲ್ಲೆ ಮಾಡುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿತ್ತು.

ಘಟನೆ ಹಿನ್ನೆಲೆಯಲ್ಲಿ ಬಾಳ್ತಿಲ ಗ್ರಾಮ ನಿವಾಸಿ ಉದಯ್​ ಎಂಬುವರು ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರರ ತಂಡ ಕೈ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಯುವಕ ಸಮೀಪದ ಮನೆಯೊಂದರಲ್ಲಿ ಮೊಬೈಲ್​ ಪೋನ್ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋ ವೈರಲ್ ಆಗಿತ್ತು.


See also  Jalabhishekam to the living Serpent on the ocassion of Nag Panchami !!

LEAVE A REPLY

Please enter your comment!
Please enter your name here