ಉಡುಪಿ, ಅ.21; ಮೂಡನಿಡಂಬೂರು ಗರಡಿ ಸನಿಹ ಹರಿಯುವ ಇಂದ್ರಾಣಿ ನದಿಯಲ್ಲಿ ಸುಮಾರು 45 ವಯಸ್ಸಿನ ಅಪರಿಚಿತ ಗಂಡಸಿನ ಶವವು ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಕಂಡು ಬಂದಿದೆ.
ನಗರ ಠಾಣಾಧಿಕಾರಿ ಸಕ್ತಿವೇಲು ಈ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಮನೋಹರ್ ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನದಿಗಿಳಿದು ಸಾಹಸದ ಕಾರ್ಯಚರಣೆಯ ಮೂಲಕ ಹರಿಯುತ್ತಿರುವ ನದಿಯಿಂದ ಶವನ್ನು ಮೇಲಕ್ಕೆತ್ತಿದ್ದಾರೆ. ಶವವನ್ನು ಅಜ್ಛರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿ ಇಡಲಾಗಿದೆ.