ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದ..! Garuda Gamana Vrishabha Vahana in legal trouble..!

0


ಚಾಮರಾಜನಗರ: ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ.

 

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು.

 

ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು ಇಲ್ಲವೇ, ಮ್ಯೂಟ್ ಮಾಡಬೇಕು ಎಂದು ಸೂಚಿಸಲಾಗಿದೆ. ಅದು ಅಲ್ಲದೇ ಅವರು ಚಿತ್ರದ ನಿರ್ದೇಶಕ ರಾಜ್ ಬಿ.ಶೆಟ್ಟಿ, ನಟ ರಿಷಬ್ ಶೆಟ್ಟಿ, ನಿರ್ಮಾಪಕರಾದ ರವಿ ರೈ.ಬಿ.ವಿ, ವಚನಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

See also  ದಯಾನಂದ ಕತ್ತಲ್ಸಾರ್ ವಿರುದ್ಧ ನಡೆಯುತ್ತಿದೆಯಾ ಅಪಪ್ರಚಾರ ?

LEAVE A REPLY

Please enter your comment!
Please enter your name here