ನನ್ನ ಮನೆಯನ್ನು ಲೂಟಿ ಮಾಡಲಾಗಿದೆ, ನನ್ನ ಮೇಲೆ ಜೀವಬೆದರಿಕೆ ಇದೆ ನನಗೆ ರಕ್ಷಣೆ ನೀಡಿ ಎಂದು ಶ್ರೀನಿವಾಸ್ ಮೂರ್ತಿ ಮಾಧ್ಯಮಗಳ ಮುಂದೆ ಅಳುವುದು ಹೇಳಿದರು.
ತಡರಾತ್ರಿ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೆ 15ಕ್ಕೂ ಹೆಚ್ಚು ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪೊಲೀಸ್ ಠಾಣಾ ಆವರಣದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಕೆ.ಜಿ.ಹಳ್ಳಿ ಠಾಣೆ ಬಳಿ ಬರುವಂತೆ ಸೂಚನೆ ನೀಡಲಾಗಿದೆ.
ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸೋದರಳಿಯ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಎಂದು ಗುಂಪು ಆರೋಪಿಸಿದೆ.