ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಶಾಸಕ ಕೆ. ರಘುಪತಿ ಭಟ್ ಪರಿಹಾರ

0

ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿ ಸುಧಾಮ ಪೂಜಾರಿ ಎಂಬುವವರು ಇತ್ತೀಚೆಗೆ ಸುರಿದ ಭಾರಿ ಮಳೆಯ ನೆರೆಗೆ ಕೊಚ್ಚಿಹೋಗಿ ಮೃತಪಟ್ಟಿರುತ್ತಾರೆ. ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸು ಮಾಡಿರುವಂತೆ ಪ್ರಾಕೃತಿಕ ಪರಿಹಾರ ನಿಧಿಯಿಂದ ರೂ. 5 ಲಕ್ಷ ಮಂಜೂರಾಗಿರುತ್ತದೆ.

ಇಂದು ದಿನಾಂಕ 25-08-2020 ರಂದು ಮೃತರ ಮನೆಗೆ ಭೇಟಿ ನೀಡಿದ ಶಾಸಕ ಕೆ. ರಘುಪತಿ ಭಟ್ ರವರು ಮೃತ ಸುಧಾಮ ಪೂಜಾರಿ ಅವರ ಕುಟುಂಬದವರಿಗೆ ರೂ. 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ವಿಶು ಕುಮಾರ್ ಕಲ್ಯಾಣಪುರ, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಸತೀಶ್, ನವೀನ್, ಅಪ್ಪು ಜತ್ತನ್ ಉಮೇಶ್, ಮತ್ತು ಪಕ್ಷದ ಕಾರ್ಯಕರ್ತರಾ ಸುರೇಶ್ ಹಾಗೂ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ವಿಶ್ವನಾಥ್, ಕಲ್ಯಾಣಪುರ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.


 

See also  ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸುಟ್ಟು ಕರಕಲಾದ ಬೇಕರಿ !

LEAVE A REPLY

Please enter your comment!
Please enter your name here